ಮೊನ್ನೆ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಲ್ಲಿ ನಡೆದ ಉಪ ರಾಷ್ಟ್ರಪತಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾತನಾಡಲು ಅವಕಾಶ ನೀಡದೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಆಡಳಿತ ಮಂಡಳಿ ಸದಸ್ಯ ರವಿ ಮಾಳಗೇರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಷ್ಟಾಚಾರ ಪಾಲಿಸದ ಹಿನ್ನೆಲೆಯಲ್ಲಿ ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಕುಲಪತಿ ಡಾ. ಪಿ ಎಸ್ ಪಾಟೀಲರ ಮೇಲೆ ಕ್ರಮ ಕೈಗೊಳ್ಳಬೇಕೆಂದು ರವಿ ಮಾಳಗೇರ ಸರ್ಕಾರಕ್ಕೆ ದೂರು ನೀಡಿದ್ದಾರೆ.
ರಾಜ್ಯ ಸರ್ಕಾರದಿಂದ ವೇತನ ಪಡೆಯುವ ಕೃಷಿ ವಿ ವಿ ಕುಲಪತಿ, ಜಿಲ್ಲಾ ಉಸ್ತುವಾರಿ ಸಚಿವರನ್ನು ವೇದಿಕೆ ಮೇಲೆ ಕರೆದು, ಅವರಿಗೆ ಮಾತನಾಡಲು ಅವಕಾಶ ಕೊಡದೆ ಇರುವದನ್ನು, ಮಾಳಗೇರ ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ.
