Download Our App

Follow us

Home » ಪ್ರಯಾಣ » ಲೋಕಾಪುರ ಸವದತ್ತಿ ಧಾರವಾಡ ನೂತನ ರೈಲು ಮಾರ್ಗಕ್ಕೆ ಜಗದೀಶ ಶೆಟ್ಟರ ಬೇಡಿಕೆ.

ಲೋಕಾಪುರ ಸವದತ್ತಿ ಧಾರವಾಡ ನೂತನ ರೈಲು ಮಾರ್ಗಕ್ಕೆ ಜಗದೀಶ ಶೆಟ್ಟರ ಬೇಡಿಕೆ.

ರೈಲ್ವೇ ಇಲಾಖೆಗೆ ಸಂಬಂದಿಸಿದಂತೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಹುಬ್ಬಳ್ಳಿಯಲ್ಲಿ ಸಭೆ ನಡೆಸಿದರು.

ಬೆಳಗಾವಿಗೆ ಸಂಬಂಧಿಸಿದಂತೆ ರೈಲು ಸೇವೆ ಒದಗಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಲಾಯಿತು.

ಬೆಂಗಳೂರು – ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿವರೆಗೆ ವಿಸ್ತರಿಸುವುದು ಬಹಳ ಅವಶ್ಯವಿದ್ದು ಇದು ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯೂ ಸಹ ಆಗಿದೆ ಎಂದರು.

ಬೆಳಗಾವಿ ಮಿರಜ್ ನಡುವೆ ಸಂಚರಿಸುವ ರೈಲನ್ನು ಮೆಮೊ ರೈಲನ್ನಾಗಿ ಮಾಡುವಂತೆ ಮನವಿ ಮಾಡಿದರು.

ಲೋಕಾಪುರ – ರಾಮದುರ್ಗ – ಸವದತ್ತಿ – ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಬೇಡಿಕೆ ಇಟ್ಟ ಜಗದೀಶ ಶೆಟ್ಟರ ಅವರು, ಈ ಮಾರ್ಗದ ಕುರಿತು ಮುಂಚಿತ ಸಮೀಕ್ಷೆ ನಡೆಸುವುದು ಸೂಕ್ತ ಈ ನಿಟ್ಟಿನಲ್ಲಿ ಕೂಡಲೇ ಮುಂದಿನ ಅಗತ್ಯ ಕ್ರಮವನ್ನು ಜರುಗಿಸಲು ಸೂಚಿಸಿದರು. 

ಕೇಂದ್ರ ಸಚಿವ ಪ್ರಲ್ಲಾದ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೈರುತ್ಯ ವಲಯದ ರೈಲ್ವೆ ಮಹಾಪ್ರಬಂಧಕ ಅರವಿಂದ ಶ್ರೀನಿವಾಸ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!