ಕುಂಭಮೇಳಕ್ಕೆ ಹೋಗಿ ವಾಪಸಾಗುವ ಸಂದರ್ಭದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಧ್ಯಪ್ರದೇಶದ ಇಂದೂರ ಬಳಿ ಇರುವ ಮಾಣಪುರ ಬಳಿ ಈ ಭೀಕರ ದುರಂತ ಸಂಭವಿಸಿದೆ. ಮೃತಪಟ್ಟ ನಾಲ್ವರು ಬೆಳಗಾವಿಯ ಗಣೇಶಪುರದ ನಿವಾಸಿಗಳೆಂದು ಹೇಳಲಾಗಿದೆ.
ಬೆಳಗಾವಿಯ ಒಟ್ಟು 18 ಜನ ಟ್ರಾವಲರ್ ಬಾಡಿಗೆ ಮಾಡಿಕೊಂಡು ಕುಂಭಮೇಳಕ್ಕೆ ಹೋಗಿದ್ದರು ಎನ್ನಲಾಗಿದೆ. ಈ ಪೈಕಿ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
![Karnataka Files](https://secure.gravatar.com/avatar/3c8a792dfb280b36a94603273157ff83?s=96&r=g&d=https://karnatakafiles.com/wp-content/plugins/userswp/assets/images/no_profile.png)